ಬೆಂಗಳೂರು: ಮೀಟರ್ ಬಡ್ಡಿ ಕಿರುಕುಳ ಮತ್ತು ಸಾಲದ ಬಾಧೆಯಿಂದ ಬೇಸತ್ತು ಆಟೋ ಚಾಲಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.
ಜೀ ಯೌಸುಫ್ ಜಮಾಲ್ದ್ದಿನ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಯೌಸುಫ್ ಜಮಾಲ್ದ್ದಿನ್ ವಿಷ ಕುಡಿಯುವ ವಿಡಿಯೋ ಮಾಡಿ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದಾನೆ. ವಿಡಿಯೋದಲ್ಲಿ ತಾನುಮಾಡಿಕೊಂಡಿದ್ದ ಸಾಲದ ಬಗ್ಗೆ ಹಾಗೂ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದವರ ಬಗ್ಗೆ ಉಲ್ಲೇಖಿಸಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Laxmi News 24×7