Breaking News

ಬರೀ SIR ಬಗ್ಗೆ ಮಾತನಾಡೋಕೆ ಬಂದಿದ್ದೀರಾ? – ಆರ್.ಅಶೋಕ್ ಕಾರು ಅಡ್ಡಗಟ್ಟಿ ರೈತರ ಆಕ್ರೋಶ

Spread the love

ಚಾಮರಾಜನಗರ: ಜಿಲ್ಲೆಗೆ ಆಗಮಿಸಿದ್ದ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರಿಗೆ ಇಲ್ಲಿನ ರೈತರು ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಕೇವಲ ಎಸ್‌ಐಆರ್ ವಿಚಾರದ ಬಗ್ಗೆ ಮಾತನಾಡಲು ಮಾತ್ರ ಚಾಮರಾಜನಗರಕ್ಕೆ ಬಂದಿದ್ದೀರಾ? ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೇ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಇಲ್ಲಿ ಬರ ಅಧ್ಯಯನ ನಡೆಸಿಲ್ಲ ಎಂದು ರೈತರು ತೀವ್ರ ಅಸಮಾಧಾನ ಹೊರಹಾಕಿದರು.

ನಗರದ ಜೆಎಸ್ಎಸ್ ಆಸ್ಪತ್ರೆಯ ಬಳಿ ಅಶೋಕ್ ಅವರ ವಾಹನವನ್ನು ತಡೆದು ನಿಲ್ಲಿಸಿದ ರೈತ ಮುಖಂಡರು, ವಿರೋಧ ಪಕ್ಷದ ನಾಯಕರಾಗಿ ನೀವು ರಾಜ್ಯ ಸರ್ಕಾರಕ್ಕೆ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕು. ಬಿಜೆಪಿಯ ಸಂಸದರು ತಕ್ಷಣವೇ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ

ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಆರ್. ಅಶೋಕ್, ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಶಾಶ್ವತ ನಿವಾಸ ಪ್ರಮಾಣ ಪತ್ರದಿಂದ ದೇಶದ ಭದ್ರತೆಗೆ ಧಕ್ಕೆ
ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐಆರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನ ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನ ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ. ಅಂದರೆ ಇಷ್ಟು ದಿನ ನಾವೆಲ್ಲರೂ ಅತಂತ್ರವಾಗಿ ವಾಸಿಸುತ್ತಿದ್ದೆವಾ ಎಂದು ಪ್ರಶ್ನೆ ಮಾಡಬೇಕಿದೆ. ದೇಶದಲ್ಲಿ ಸುಮಾರು 2 ಕೋಟಿ ಬಾಂಗ್ಲಾ ಪ್ರಜೆಗಳಿದ್ದಾರೆ. ಇಂತಹವರಿಗೆ ಪ್ರಮಾಣಪತ್ರ ನೀಡಿದರೆ ಅವರನ್ನು ವಾಪಸ್‌ ಕಳುಹಿಸಲು ಸಾಧ್ಯವಾಗುವುದಿಲ್ಲ. ಅಲ್ಪಸಂಖ್ಯಾತರನ್ನ ಓಲೈಸಲು ಸರ್ಕಾರ ಈ ಕುತಂತ್ರ ಮಾಡಿದೆ ಎಂದರು.

ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಭಾರತೀಯ ನಾಗರಿಕರು ಅಲ್ಲ ಎಂದು ಗೊತ್ತಾದರೆ ಅವರನ್ನು ಸಂಬಂಧಿಸಿದ ದೇಶಕ್ಕೆ ಕಳುಹಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಮೊದಲು ಕಾಂಗ್ರೆಸ್‌ನ ಪಾರ್ಟ್‌ನರ್‌ ಮಮತಾ ಬ್ಯಾನರ್ಜಿ ಅಧಿಕಾರದಲ್ಲಿದ್ದರು. ಆಗ ಅನೇಕ ಬಾಂಗ್ಲಾ ಜನರು ಬಂದಿದ್ದು, ಆ ಬಗ್ಗೆ ಕಾಂಗ್ರೆಸ್‌ ಪ್ರಶ್ನೆ ಮಾಡಿರಲಿಲ್ಲ. ಅಸ್ಸಾಂ, ಬಿಹಾರದಲ್ಲೂ ಇದೇ ಸಮಸ್ಯೆ ಇದೆ. ನಕ್ಸಲ್‌ ಸಮಸ್ಯೆ ಆರಂಭವಾಗಲು ಕೂಡ ಕಾಂಗ್ರೆಸ್‌ ಕಾರಣ. ಕಾಂಗ್ರೆಸ್‌ ನಾಯಕರು ಇಷ್ಟು ವರ್ಷ ಕತ್ತೆ ಕಾದು, ಈಗ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರ ದೇಶದ್ರೋಹಿಗಳಿಗೆ ಮಣೆ ಹಾಕಿದರೆ ಕೋಮು ಗಲಭೆ ಹೆಚ್ಚುತ್ತದೆ. ಈಗಾಗಲೇ ಮುಸ್ಲಿಂ ಸಂಘಟನೆಗಳ ವಿರುದ್ಧದ ಕೇಸುಗಳನ್ನು ವಾಪಸ್‌ ಪಡೆಯಲಾಗಿದೆ. ಅವರನ್ನು ಓಲೈಸಲು ಪ್ರಮಾಣಪತ್ರ ನೀಡಬೇಕಿಲ್ಲ ಎಂದರು.


Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ