Breaking News

ಸಂಕೇಶ್ವರ ಪಟ್ಟಣದಲ್ಲಿ ದೇವಸ್ಥಾನ ಕುಳಿತು ಎಸ್ಐಆರ್ ಕಾರ್ಯ

Spread the love

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿ, ಅಗತ್ಯ ನಮೂನೆ ವಿತರಿಸಿ ಪರಿಶೀಲನೆ ನಡೆಸಬೇಕಾಗಿದೆ. ಆದರೆ ಕೆಲವು ಬಿಎಲ್‌ಒಗಳು ಮನೆಗಳಿಗೆ ತೆರಳುವ ಬದಲು ಸಾರ್ವಜನಿಕರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದು ಸಮುದಾಯ ಭವನದಲ್ಲೇ ನಮೂನೆಗಳು ಭರ್ತಿ ಮಾಡುತ್ತಿರುವ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – ಸಿದ್ಧತೆ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಕಳೆಗಟ್ಟಿದೆ, ವಿವಿಧ ಕಾರ್ಯಕ್ರಮಗಳಿಗೆ ಭರದ ಸಿದ್ಧತೆ ನಡೆಯುತ್ತಿದ್ದು, ಹಬ್ಬದ ವಾತಾವರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ