Breaking News

ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

Spread the love

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ  ಮೊಮ್ಮಗ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟ  ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಗಯ್ಯದೊಡ್ಡಿಯಲ್ಲಿ ನಡೆದಿದೆ.

ಗೌರಮ್ಮ (65) ಮೃತ ವೃದ್ಧೆ. ಪ್ರಜ್ವಲ್ ಕೊಲೆ ಮಾಡಿದ ಮೊಮ್ಮಗ. ಪ್ರಜ್ವಲ್ ಎಲ್ಲಿಯೂ ಕೆಲಸಕ್ಕೆ ಹೋಗದೇ ಗಾಂಜಾ, ಕುಡಿತದ ವ್ಯಸನಿಯಾಗಿದ್ದ. ಮಗ ಕೈ ತಪ್ಪುತ್ತಿದ್ದಾನೆ ಎಂದು ಅಜ್ಜಿ ಆತನ ತಾಯಿಗೆ ಹೇಳಿದ್ದಾರೆ. ನಶೆಯಲ್ಲಿ ಮನೆಗೆ ಬಂದು ಗಲಾಟೆ ಮಾಡಿದಾಗ ಅಜ್ಜಿ ಆತನಿಗೆ ಬುದ್ಧಿ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಮೊಮ್ಮಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಇರಿದು ಅಜ್ಜಿಯ ಕೊಲೆ ಮಾಡಿದ್ದಾನೆ.

ಮುಂಜಾನೆ ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಜ್ಜಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Spread the loveನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ  ಪರೇಡ್ ಶುರುವಾಗಿದೆ. ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ