Breaking News

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಏನುಮೇರೇಷನ್ ಫಾರಂ ಸಲ್ಲಿಸಿದ ಡಾ. ವೀರಣ್ಣ ಚರಂತಿಮಠ

Spread the love

ಬಾಗಲಕೋಟೆ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIಖ) ಅಭಿಯಾನದ ಅಂಗವಾಗಿ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ತಮ್ಮ ಏನುಮೇರೇಷನ್ ಫಾರಂ ಅನ್ನು ಬೂತ್ ಸಂಖ್ಯೆ ೧೬೬ರ ಬೂತ್ ಮಟ್ಟದ ಅಧಿಕಾರಿ (ಃಐಔ) ಶ್ರೀ ಮಹಾಂತೇಶ ಡೋಣಿ ಅವರಿಗೆ ಸಲ್ಲಿಸಿದರು. ಮತದಾರರ ಪಟ್ಟಿಯನ್ನು ನಿಖರ ಹಾಗೂ ಸಮಗ್ರಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಈ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಬೂತ್ ಮಟ್ಟದ ಏಜೆಂಟ್ (ಃಐಂ-೨) ಶ್ರೀ ಮಲ್ಲಿಕಾರ್ಜುನ ಕಾಂಬಳೆ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನ

Spread the loveಧಾರವಾಡ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ  ಹೊತ್ತಿ ಉರಿದ ಪರಿಣಾಮ 12 ಜಾನುವಾರುಗಳು ಸಜೀವ ದಹನಗೊಂಡ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ