Breaking News

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ಯುವಕ ಪೊಲೀಸ್ ವಶಕ್ಕೆ

Spread the love

ಸುಬ್ರಹ್ಮಣ್ಯ: ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಕಲ್ಲಾಜೆ ದೇವನಹಳ್ಳಿ ಎಂಬಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಅಪ್ರಾಪ್ತ ಪುತ್ರಿ ಜು.7ರಂದು ಯೇನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜು.9ರಂದು ಮನೆಗೆ ಹಿಂದಿರುಗಿದ್ದಳು. ಈ ವೇಳೆ ಸ್ನೇಹಿತೆಯ ಮನೆಯಲ್ಲಿ ಇದ್ದಾಗ, ಕಲ್ಲಾಜೆ ದೇವನಹಳ್ಳಿ ನಿವಾಸಿ ಮೋಕ್ಷಿತ್ ಎಂಬಾತ ಮನೆ ಸಮೀಪಕ್ಕೆ ಕರೆದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ