Breaking News

ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರಗಳಿಗೆ ಕೊಡಲಿ – ದುಷ್ಕರ್ಮಿ ಅರೆಸ್ಟ್‌

Spread the love

ದಾವಣಗೆರೆ: ಜಮೀನಿನಲ್ಲಿ ಬೆಳೆದಿದ್ದ 600ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ನಾಶಪಡಿಸಿದ್ದ ಅರೋಪಿಯನ್ನು ದಾವಣಗೆರೆ (Davanagere) ಜಿಲ್ಲೆಯ ಮಾಯಕೊಂಡ ಠಾಣೆ ಪೊಲೀಸರು  ಬಂಧಿಸಿದ್ದಾರೆ.

ಬುಳ್ಳಾಪುರ ಗ್ರಾಮದ ಕಿರಣ್.ಆರ್ (26) ಬಂಧಿತ ಆರೋಪಿ. ಜುಲೈ 3ರಂದು ಬುಳ್ಳಾಪುರ ತಾಂಡದ ಸಿದ್ದೇಶ್ ನಾಯ್ಕ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿದ್ದ ಸುಮಾರು 600ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ನಾಶ ಮಾಡಿದ್ದರು. ಸುಮಾರು 5 ಲಕ್ಷ ರೂ.ಗಿಂತಲೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿತ್ತು.

ತನಿಖೆ ವೇಳೆ ಆರೋಪಿಗಳು ವೈಯಕ್ತಿಕ ಜಗಳದಿಂದ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ