Breaking News

ಪ್ರಧಾನ್‌ ರಾಜೀನಾಮೆ ಬಗ್ಗೆ ನಾಳೆಯವರೆಗೆ ಕೇಂದ್ರ ಸಮಯ ಕೇಳಿದೆ: ಸಿಜೆಪಿ

Spread the love

ನವದೆಹಲಿ: ಮೂರು ಬೇಡಿಕೆಯ ಪೈಕಿ ಕೇಂದ್ರ ಸರ್ಕಾರ ನಮ್ಮ ಎರಡು ಬೇಡಿಕೆಯನ್ನು ಒಪ್ಪಿಕೊಂಡಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹೇಳಿದೆ.

ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್  ಅವರು ದೆಹಲಿಯ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಈ ವೇಳೆ ಸಿಜೆಪಿ ಧರ್ಮೇಂದ್ರ ಪ್ರಧಾನ್‌ ಅವರನ್ನು ಸಂಪುಟದಿಂದ ತೆಗೆಯಬೇಕು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಾಕಲಾಗಿರುವ ಕೇಸ್‌ಗಳನ್ನು ಹಿಂದಕ್ಕೆ ಪಡೆಯಬೇಕು ಮತ್ತು ಮತ್ತು ಆತ್ಮಹತ್ಯೆ ಮಾಡಿಕೊಂಡಿರುವ ನೀಟ್‌ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರ ಕೊಡಬೇಕೆಂಬ ಬೇಡಿಕೆಯನ್ನು ಮುಂದಿರಿಸಿತು.

ಸಭೆಯ ಬಳಿಕ ಮಾತನಾಡಿದ ವಕ್ತಾರರು, ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಬಿಟ್ಟು ಉಳಿದ ಎರಡು ಬೇಡಿಕೆ ಈಡೇರಿಸುವ ಸರ್ಕಾರ ಸಕಾರತ್ಮಕವಾಗಿ ಸ್ಪಂದಿಸಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದು ಹೇಳಿದರು.

ಅಶುತೋಷ್ ರಂಕಾ ಪ್ರತಿಕ್ರಿಯಿಸಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ನಮ್ಮ ಬೇಡಿಕೆಯ ಮೇರೆಗೆ ಸರ್ಕಾರ ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಸರ್ಕಾರ ಶೀಘ್ರದಲ್ಲೇ ಅವರನ್ನು ವಜಾಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಆತ್ಮಹತ್ಯೆಯಿಂದ ಸಾವನ್ನಪ್ಪಿದ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಮತ್ತು ಎಫ್‌ಐಆರ್‌ಗಳನ್ನು ಹಿಂಪಡೆಯುವುದು, ವಿದ್ಯಾರ್ಥಿಗಳ ಮೇಲಿನ ಕಾನೂನು ಪ್ರಕರಣಗಳು ಎಂಬ ಎರಡು ಬೇಡಿಕೆಗಳಿಗೆ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಹೇಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ