Home / ಜಿಲ್ಲೆ / ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

Spread the love

ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ. ಕೊರೊನಾನಾದಿಂದ ರಾಜರು ಮಾಡುವ ಶಾಸನಗಳು ಪ್ರಜೆಗಳ ವಿರೋಧಿಯಾಗಲಿದೆ. ದಟ್ಟವಾದ ಮೋಡ ಕವಿದು ಕತ್ತಲಾಗಲಿದೆ ಈ ಮಧ್ಯೆ ಒಂದು ಮಿಂಚು ಬಂದು ಮೋಡ ದೂರ ಸರಿಸಲಿದೆ. ಕಾರ್ಮೋಡವಾಗಿ ಬಂದಿರುವ ಈ ಕೊರೊನಾ ಮುಂದೆ ಒಳ್ಳೆಯ ಚಿಂತನೆ ಕೊಡಲಿದೆ. ಎರಡು ಮೂರು ತಿಂಗಳಲ್ಲಿ ಕೊರೊನಾ ಕಡಿಮೆಯಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ