Breaking News

ನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿ

Spread the love

ಬೆಂಗಳೂರು: ನಮಗೇ ಕುಡಿಯೋಕೆ ನೀರಿಲ್ಲ, ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಎಂದು ಡಿಸಿಎಂ ಪರಮೇಶ್ವರ್ ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಕಾವೇರಿ ನೀರು  ತಮಿಳುನಾಡಿಗೆ ಹರಿಸುವ ವಿಚಾರವಾಗಿ ಮಾತನಾಡಿದ ಅವರು, ನಮಗೇ ಕುಡಿಯಲು ನೀರಿಲ್ಲ. ಹಾಗಿದ್ದಾಗ 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಇದರ ಬಗ್ಗೆ ಚರ್ಚೆಗೆ ಸಿಎಂ ಸರ್ವಪಕ್ಷದ ಸಭೆ ಕರೆಯುತ್ತಾರೆ. ಸೋಮವಾರ (ಆ.3) ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಬರ್ತಾರೆ, ಅವರ ಜೊತೆಗೂ ಸಿಎಂ ಚರ್ಚೆ ಮಾಡಬಹುದು. ಇವತ್ತು ರಾಮಲಿಂಗಾರೆಡ್ಡಿ ಸಭೆ ಕರೆದಿದ್ದಾರೆ, ಮುಂದೇನು ಮಾಡಬೇಕು ಅಂತ ಚರ್ಚಿಸ್ತಾರೆ. ಈ ಸಂಬಂಧ ಸಹಜವಾಗಿ ರೈತರು ಪ್ರತಿಭಟನೆ ಮಾಡ್ತಾರೆ, ನಿನ್ನೆಯಿಂದ ಹೋರಾಟ ಮಾಡ್ತಿದ್ದಾರೆ. ಸರ್ಕಾರ ಅಂತಿಮವಾಗಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ ಎಂದಿದ್ದಾರೆ. ಇದನ್ನೂ 

ಮೇಕೆದಾಟು ವಿಚಾರವಾಗಿ ಮಾತನಾಡಿ, ಮೇಕೆದಾಟು ಯೋಜನೆಗೆ ಆಕ್ಷೇಪ ಮಾಡುವಂತಿಲ್ಲ ಅಂತ ಸಂಸತ್ ಹೇಳಿದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ಅದೇ ಅಂತಿಮ. ಕೋರ್ಟ್ ಈಗಾಗಲೇ ಹೇಳಿದೆ, ಹೀಗಾಗಿ ಅದರಂತೆ ನಡೆಯಬೇಕು. ಜೋಸೆಫ್ ವಿಜಯ್ ಪಿಎಂಗೆ ಪತ್ರ ಬರೆದಿದ್ದಾರೆ, ಬರೆಯಲಿ. ಆದ್ರೆ ಕೋರ್ಟ್ ಏನು ಹೇಳಿದೆಯೋ ಅದೇ ಅಂತಿಮ ಎಂದಿದ್ದಾರೆ.

ಸಿಎಂ ವಿಜಯ್-ಡಿಕೆಶಿ ಭೇಟಿಗೆ ಬಿಜೆಪಿ ಟೀಕೆ ವಿಚಾರವಾಗಿ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ಇದೆಲ್ಲ ಸಹಜ. ಎರಡೂ ರಾಜ್ಯಗಳ ಸಿಎಂ ಒಂದಷ್ಟು ವಿಚಾರದ ಬಗ್ಗೆ ಚರ್ಚೆ ಮಾಡ್ತಾರೆ. ಟಿಬಿ ಡ್ಯಾಮ್ ಕ್ರಸ್ಟ್ ಗೇಟ್ ಉದ್ಘಾಟನೆಗೆ ಮೂರು ರಾಜ್ಯಗಳ ಸಿಎಂಗಳು ಬಂದಿದ್ರು. ನಾವು ಅಕ್ಕಪಕ್ಕದ ರಾಜ್ಯಗಳು ಏನು ಜಗಳ ಆಡ್ಕೋಬೇಕಾ? ಯಾರೂ ಹೊಂದಾಣಿಕೆಯಲ್ಲಿ ಹೋಗಬಾರದಾ? ರಾಜ್ಯಗಳು ಜಗಳ ಆಡ್ಕೋಬೇಕು ಅನ್ನೋದು ಬಿಜೆಪಿ ನೀತಿ ಇರಬೇಕು, ಅದಕ್ಕೆ ಹಾಗೆ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ