ಬೆಳಗಾವಿ : ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೆಲ ದಿನದಿಂದ ಸುರಿದ ಮಳೆಯಿಂದಾಗಿ ಜಿಲ್ಲೆಯ ಸಂಗ್ರಹ ನದಿಗಳು ಮೈದುಂಬಿ ಹರಿಯುತ್ತಿವೆ,ಇದೀಗ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ರಕ್ಕಸಕೊಪ್ಪ ಜಲಾಶಯ ಭರ್ತಿ:
ಮಳೆಯಿಂದಾಗಿ ಕೃಷ್ಣಾ,ವೇದಗಂಗಾ,ದೂಧಗಂಗಾ ,ಹಿರಣ್ಯಕೇಶಿ,ಘಟಪ್ರಭಾ,ಮಲಪ್ರಭಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.ಮಾರ್ಕೆಂಡಯ ನದಿ ನೀರಿನಿಂದ 2475 ಅಡಿ ಸಾಮರ್ಥ್ಯದ ರಕಸಕೊಪ್ಪ ಜಲಾಶಯ ಭರ್ತಿ ಹಂತ ತಲುಪಿದ್ದು,ಬುಧವಾರ 2473 ಅಡಿ ನೀರು ಸಂಗ್ರಹವಾಗಿದ್ದು,ಹೆಚ್ಚಿನ ನೀರು ಹೊರ ಬಿಡಲಾಗುತ್ತಿದೆ.
ಕೃಷ್ಣಾ ನದಿಗೂ ಅಪಾರ ನೀರು:
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಕಳೆದೊಂದು ವಾರದಿಂದ ನಿತ್ಯ 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜೊತೆಗೆ ನದಿಗಳು ತುಂಬಿ ಹರಿಯುತ್ತ ನದಿ ಅವಲಂಬಿತ ಕೃಷಿಕರಲ್ಲಿ ಸಂತಸ ಮೂಡಿದೆ.
Laxmi News 24×7