Breaking News

ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಕಿಡಿಗೇಡಿಗಳು ಕೊನೆಗೂ ಲಾಕ್‌!

Spread the love

ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಮ್ಮ ಅಂಗಡಿಗೆ ವ್ಯಾಪಾರ ಹೆಚ್ಚಿಸಿಕೊಳ್ಳುವ ದುರಾಸೆಯಿಂದ, ಇವರು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ಹೋಗುತ್ತಿದ್ದರು. ಸವಾರರು ಪಂಚರ್ ಆದ ವಾಹನಗಳನ್ನು ತಳ್ಳಿಕೊಂಡು ಬಂದಾಗ ರಸ್ತೆ ಬದಿಯಲ್ಲೇ ಪ್ರತ್ಯಕ್ಷರಾಗಿ ಪಂಚರ್ ಹಾಕಿಕೊಡುವ ನಾಟಕವಾಡುತ್ತಿದ್ದರು.

ಸತತವಾಗಿ ವಾಹನಗಳು ಪಂಚರ್ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಾಗೃತರಾದ ಬೆಂಗಳೂರು ಟ್ರಾಫಿಕ್ ಪೊಲೀಸರು ಆ ಪ್ರದೇಶದ ಪರಿಶೀಲನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿ ಅಪಾರ ಪ್ರಮಾಣದ ಮೊಳೆಗಳು ಪತ್ತೆಯಾಗಿದ್ದವು. ತಕ್ಷಣವೇ ಸಿಸಿಟಿವಿ ಕ್ಯಾಮೆರಾ  ದೃಶ್ಯಾವಳಿಗಳನ್ನು ತನಿಖೆಗೊಳಪಡಿಸಿದಾಗ, ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಗೆ ಮೊಳೆ ಚೆಲ್ಲುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದ್ದವು.

ಸಿಸಿಟಿವಿ ವೀಡಿಯೋ ಸಾಕ್ಷ್ಯಾಧಾರಗಳ ಬೆನ್ನತ್ತಿದ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ