ಧಾರವಾಡಗೆ ಬರುತ್ತಿದಂತೆ ಲಾಡ್ ಅವರಿಗೆ ರೈತರ ಪ್ರತಿಭಟನೆ ಬಿಸಿ…. ಬರ ಜಿಲ್ಲೆಯೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ರೈತರಿಂದ ನೂತನ ಸಚಿವ ಸಂತೋಷ ಲಾಡ್ಗೆ ಮನವಿ.
ಸಿಎಂ ಡಿಕೆಶಿಯವರ ಕ್ಯಾಬಿನೆಟನಲ್ಲಿ ಮಂತ್ರಿ ಸ್ಥಾನ ಪಡೆದುಕೊಂಡ ಬಳಿಕ ಮೊದಲ ಬಾರಿಗೆ ಧಾರವಾಡಗೆ ಸಚಿವ ಸಂತೋಷ ಲಾಡ್ ಅವರು ಭೇಟಿ ನೀಡುತ್ತಿದಂತೆ, ಲಾಡ್ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ.
ಹೌದು… ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಇಂದು ಧಾರವಾಡಗೆ ಮೊದಲ ಬಾರಿ ಆಗಮಿಸಿದ ಸಂತೋಷ ಲಾಡ್ ಅವರು, ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಜಿಲ್ಲೆಯಲ್ಲಿನ ಮಳೆ ಬೆಳೆಯ ಹಾನಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಂದಿದ್ದರು. ಈ ವೇಳೆ ಲಾಡ್ ಅವರು ಡಿಸಿ ಕಚೇರಿ ಪ್ರವೇಶ ಮಾಡುತ್ತುದಂತೆ ರೈತರು ಪ್ರತಿಭಟನೆ ಮಾಡಿ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಬರಗಾಲ ಬಂದಿದೆ. ಮಳೆಯ ಕೊರತೆಯಿಂದ ರೈತರ ಬೀದಿಗೆ ಬರು ಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ಧಾರವಾಡ ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ರೈತರ ಸಲಾ ಮನ್ನಾ ಮಾಡಿ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಲು ಎಂದು ಇದೇವೇಳೆ ರೈತರು ಸಚಿವರಿಗೆ ಒತ್ತಾಯ ಮಾಡಿದರು
Laxmi News 24×7