ಸಬಲೀಕರಣದ ಹೆಜ್ಜೆಯಾಗಿ ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಣೆ
ಗೋಕಾಕ ನಗರದ ಗೃಹ ಕಚೇರಿಯಲ್ಲಿ ಇಂದು ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿಶೇಷಚೇತನರಿಗಾಗಿ ಶಾಸಕರ ಅನುದಾನದಡಿ ಮಂಜೂರಾದ 33 ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿತರಿಸಿದರು
ವಿಶೇಷಚೇತನರ ಸ್ವಾವಲಂಬನೆ, ಸುಗಮ ಸಂಚಾರ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಪುಟ್ಟ ನೆರವು ಮಹತ್ವದ ಹೆಜ್ಜೆಯಾಗಿದೆ. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಗೌರವ ಮತ್ತು ಸ್ವಾವಲಂಬನೆಯ ಬದುಕು ದೊರೆಯಬೇಕು ಎಂಬ ಆಶಯದೊಂದಿಗೆ ಜನಪರ ಕಾರ್ಯಗಳು ನಿರಂತರವಾಗಿ ಸಾಗಲಿವೆ.
ಜನಸೇವೆ ನಮ್ಮ ಸಂಕಲ್ಪ – ಸರ್ವರ ಸಬಲೀಕರಣ ನಮ್ಮ ಗುರಿ.
Laxmi News 24×7