Breaking News

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

Spread the love

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ರೇಡ್  ಮಾಡಿಸಿದ್ದು ನಾನೇ. ರೇಡ್ ಆಗಬೇಕಾದರೂ ಗೃಹ ಇಲಾಖೆಯ ಅನುಮತಿ ಬೇಕು. ಎರಡು ವಾರದ ಹಿಂದೆ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿದ್ದೆ. ಅಲ್ಲಿ ಕೆಲವು ಲೋಪಗಳಾಗಿದ್ದವು. ಹೀಗಾಗಿ ಮುಖ್ಯಮಂತ್ರಿಗಳ ಅನುಮತಿ ಪಡೆದು ರೇಡ್ ಮಾಡಿಸಿದೆ ಎಂದು ತಿಳಿಸಿದರು.

ಅಧಿಕಾರಿಗಳ ಮಾಹಿತಿ ಮೇರೆಗೆ ರೇಡ್ ಮಾಡಿಸಿದ್ದೇನೆ. ಈ ಅಕ್ರಮಕ್ಕೆ ಸಹಕಾರ ಕೊಟ್ಟ ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಪರಪ್ಪನ ಅಗ್ರಹಾರ ಮಾತ್ರವಲ್ಲ, ರಾಜ್ಯದ ಎಲ್ಲಾ ಕಾರಾಗೃಹಗಳ ಮೇಲೆಯೂ ಇಂತಹ ಕಾರ್ಯಾಚರಣೆ ನಡೆಯುತ್ತದೆ. ಇದನ್ನು ನಿರಂತರವಾಗಿ ಮಾಡಬೇಕು. ಕೆಲವು ಅಧಿಕಾರಿಗಳು ಇದ್ದಾರೆ, ಅವರು ತಮ್ಮ ಹಳೆ ಚಾಳಿಯನ್ನು ಬಿಟ್ಟಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಇಂತಹ ಕೆಲಸಗಳು ಯಾವಾಗಲೂ ಆಗುತ್ತಿರುತ್ತವೆ, ಹಾಗಂತ ತಕ್ಷಣ ನೇಣಿಗೆ ಹಾಕಲು ಆಗುವುದಿಲ್ಲ. ನಾನು ಖಾತೆ ತೆಗೆದುಕೊಂಡು 2 ತಿಂಗಳಲ್ಲಿ ಇಷ್ಟು ಬೇಗ ರೇಡ್ ಮಾಡಿಸಿ ಕ್ರಮ ಕೈಗೊಂಡಿದ್ದೇನೆ. ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಹಾಗೂ ಸರ್ವೀಸ್ ಡಿಸ್ಮಿಸ್ ಮಾಡಲು ಕೆಲವು ಮಾನದಂಡಗಳಿವೆ, ಅದರ ಪ್ರಕಾರವೇ ನಾವು ಕೆಲಸ ಮಾಡಬೇಕಾಗುತ್ತದೆ ಎಂದರು.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ