ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಗೆ ತೀವ್ರ ಕುತೂಹಲ ಮೂಡಿದ್ದು, ಕಡೆಗಳಿಗೆಯಲ್ಲಿ ಪ್ರಮುಖ ಖಾತೆಗಳಿಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಸಚಿವ ಯು.ಟಿ. ಖಾದರ್ ಅವರ ಬಳಿ ಇರುವ ಆರೋಗ್ಯ ಇಲಾಖೆಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಹಿಸುವ ಸಾಧ್ಯತೆಗಳಿವೆ. ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ತಮಗೆ ನೀಡಿದರೆ, ಆರೋಗ್ಯ ಇಲಾಖೆಯನ್ನು ಬಿಟ್ಟುಕೊಡಲು ಯು.ಟಿ. ಖಾದರ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಸಚಿವರ ಖಾತೆ ಹಂಚಿಕೆ ಈಗಾಗಲೇ ಅಂತಿಮಗೊಂಡಿದ್ದರೂ, ಎಲ್ಲಾ ಇಲಾಖೆಗಳ ಅಧಿಕೃತ ಮಾಹಿತಿ ಲಭ್ಯವಾದ ನಂತರವೇ ಅಂತಿಮ ಪಟ್ಟಿಯನ್ನು ಲೋಕಭವನಕ್ಕೆ ರವಾನಿಸಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
Laxmi News 24×7