ಬೆಳಗಾವಿ: ಶಿವಂ ಅಸೋಸಿಯೇಟ್ಸ್ (ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ.
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಶಿವಾನಂದ ನೀಲಣ್ಣವರ್ ಒಡೆತನದ ‘ಶಿವಂ ಅಸೋಸಿಯೇಟ್ಸ್’ ಕಂಪನಿಯ ಮೂಲಕ ನಡೆದಿದೆ ಎನ್ನಲಾದ ವಂಚನೆಯ ವಿವರಗಳನ್ನು ಬಿಚ್ಚಿಟ್ಟಿದೆ.
ಶಿವಂ ಅಸೋಸಿಯೇಟ್ಸ್ ಹಾಗೂ ಅದರ ಅಂಗ ಸಂಸ್ಥೆಗಳಿಂದ ಸುಮಾರು 2,110 ಕೋಟಿ ರೂ. ವಂಚನೆಯಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ನಂತರ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣವರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು.
ಇಡಿ ದಾಳಿಯಲ್ಲಿ 2,110 ಕೋಟಿ ರೂ. ವಂಚನೆಯಾಗಿರುವುದು ಬೆಳಕಿಗೆ ಬಂದಿದ್ದು, ಈ ಪೈಕಿ ಹೂಡಿಕೆದಾರರಿಗೆ ಕೇವಲ 333.89 ಕೋಟಿ ರೂ. ಮಾತ್ರ ವಾಪಸ್ ಆಗಿರುವುದು ಕಂಡುಬಂದಿದೆ.
Laxmi News 24×7