Breaking News

ಹಬ್ಬಕ್ಕೆ ಬಟ್ಟೆ ಕೊಡಿಸದಿದ್ದಕ್ಕೆ ಮನನೊಂದು ಸಹೋದರಿಯರು ನೇಣಿಗೆ ಶರಣು

Spread the love

ಕಲಬುರಗಿ: ಹಬ್ಬಕ್ಕೆ ತಂದೆ ಬಟ್ಟೆ ಕೊಡಿಸದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಕಲಬುರಗಿ  ಜಿಲ್ಲೆಯ ಶಹಬಾದ್  ಪಟ್ಟಣದ ಶಾಂತನಗರದಲ್ಲಿ ನಡೆದಿದೆ.

ಪಿಯುಸಿ ದ್ವಿತೀಯ ವರ್ಷದ ಪೂಜಾ (17) ಹಾಗು ಹಣಮಂತಿ ಮೃತ ಬಾಲಕಿಯರಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವೇಲ್‌ನಿಂದ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹತ್ತು ವರ್ಷಗಳ ಹಿಂದೆ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಸಹೋದರ ಹೈದರಾಬಾದ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನು ತಂದೆ ಸೇನೆಯಿಂದ ನಿವೃತ್ತಿಯಾಗಿ ಶಹಬಾದ್‌ನಲ್ಲೇ ವಾಸವಾಗಿದ್ದರು. ತಂದೆ ಕುಡಿತದ ಚಟಕ್ಕೆ ದಾಸನಾಗಿದ್ದ. ತಂದೆಗೆ ಹಬ್ಬಕ್ಕೆ ಬಟ್ಟೆ ಕೊಡಿಸುವಂತೆ ಸಹೋದರಿಯರು ಕೇಳಿದ್ದರು. ತಂದೆ ಬಟ್ಟೆ ಕೊಡಿಸದ ಹಿನ್ನಲೆ ಮಾನಸಿಕವಾಗಿ ಸಹೋದರಿಯರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ