Breaking News

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Spread the love

ಬೀದರ್: ತೆಲಂಗಾಣದಲ್ಲಿ  ಸಂಭವಿಸಿದ ಅಫಘಾತದಲ್ಲಿ ಮೃತರಾದ ಬೀದರ್‌ ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕೂಲಿಗೆ ಹೋದವರು ಆರು ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬದ ಜೊತೆ ಇದ್ದು, ಪರಿಹಾರ ನೀಡತ್ತಿದೆ. ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ನೀಡಲಿ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುತ್ತೇವೆ. ಮೃತ ಆರು ಜನಕ್ಕೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ನಾನು ವೈಯಕ್ತಿಕ ಪರಿಹಾರ ನೀಡುತ್ತೇನೆ. ಮೃತರ ಮಕ್ಕಳು ಯಾರು ವಿದ್ಯಾಭ್ಯಾಸ ಮಾಡಿದ್ದಾರೋ ಅವರಿಗೆ ಸರ್ಕಾರಿ ಕೆಲಸ ನೀಡುತ್ತೇವೆ. ಒಂದು ಆಟೋದಲ್ಲಿ 15 -20 ಜನ ತುಂಬಿಕೊಂಡು ಹೋಗೋದು ತಪ್ಪು. ಇವರ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.‌

ತೆಲಗಾಂಣದ ಜಹೀರಾಬಾದ್ ಬಳಿಯ ಮೊಗುಡಂಪಳ್ಳಿ (ಎಂ)ಯ ಸತ್ವಾರ್ ಗ್ರಾಮದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಮಂಗಳವಾರ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದರು.

ಬೀದರ್ ತಾಲೂಕಿನ ರಾಜಗೀರಾ ಗ್ರಾಮದ ಆರು ಮಂದಿ ಮೃತಪಟ್ಟಿದ್ದಾರೆ. ಕೂಲಿ ಕೆಲಸಕ್ಕೆಂದು ಆಟೋದಲ್ಲಿ ಜಹೀರಾಬಾದ್‌ಗೆ ಮಹಿಳೆಯರು ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಅವಘಡ ಸಂಭವಿಸಿತ್ತು.


Spread the love

About Laxminews 24x7

Check Also

ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ – ಎಂದಿನಂತೆ ಬಸ್‌ ಸಂಚಾರ

Spread the loveಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ  ರಾಜಧಾನಿ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ