Breaking News

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು: ಪತ್ನಿ ವಶಕ್ಕೆ, ಕೊಲೆ ಶಂಕೆ

Spread the love

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ  ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ  ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಅಭಿನವ್ (38) ಹಾಗೂ ಅವರ ಮಗ ಯದುವೀರ್ (5) ಮೃತ ದುರ್ದೈವಿಗಳು.

ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಘಟನೆ ನಡೆದ ವೇಳೆ ಮೃತರ ಪತ್ನಿ ಪಕ್ಕದ ರೂಮ್‌ನಲ್ಲಿದ್ದಳು ಎನ್ನಲಾಗಿದ್ದು, ಈ ವಿಚಾರ ಪೊಲೀಸರಿಗೆ ಅನುಮಾನ ಮೂಡಿಸಿದೆ. ಹೀಗಾಗಿ ಪೊಲೀಸರು ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ


Spread the love

About Laxminews 24x7

Check Also

ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ – ಯೋಜನೆಗಳ ಅನುಷ್ಠಾನಕ್ಕೆ ಸಮಯ ನಿಗದಿ

Spread the loveಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ.ರಘುಮೂರ್ತಿ  ಇಲಾಖೆಯ ಯೋಜನೆಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ