Breaking News

ರಾಜ್ಯ ಸರ್ಕಾರಕ್ಕೆ ಶೀಘ್ರವೇ ಬಿಜೆಪಿ ಬರಗಾಲ ಅಧ್ಯಯನ ವರದಿ ಸಲ್ಲಿಕೆ: ಎನ್.ರವಿಕುಮಾರ್

Spread the love

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ ತಂಡಗಳ ಬರಗಾಲ ಅಧ್ಯಯನ ಸಂಬಂಧಿತ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್  ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬರಗಾಲದ ಅಧ್ಯಯನಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 6 ತಂಡಗಳನ್ನು ರಚಿಸಿದ್ದರು. ತಂಡಗಳು ಜಿಲ್ಲೆಗಳು ಮಾತ್ರವಲ್ಲದೇ ಕೆಲವು ತಾಲೂಕುಗಳಿಗೂ ಭೇಟಿ ನೀಡಿವೆ ಎಂದು ವಿವರಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದೆ. ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂಬ ವಿಚಾರವನ್ನು ಗಮನಕ್ಕೆ ತರಲು ಉದ್ದೇಶಿಸಲಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಸಂಬಂಧ ವರದಿಯನ್ನು ಸಿದ್ಧಪಡಿಸಿದ್ದು, ಅದನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸುತ್ತಿರುವುದಾಗಿ ಹೇಳಿದರು.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ