Breaking News

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ

Spread the love

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 32 ಸಾವಿರ ರೂ.ಯಿಂದ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ  ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಈಗ 1.20 ಲಕ್ಷ ರೂ.ಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ