ಬೆಳಗಾವಿ ಹಿಂಡಲಗಾ ಜೈಲಿನ ಹೊಸ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಅಧಿಕಾರಿಗಳೇ ಹಣಕ್ಕಾಗಿ ವಿವಿಧ ವಾಮಮಾರ್ಗಗಳ ಮೂಲಕ ಕೈದಿಗಳ ಜೀವ ಹಿಂಡುತ್ತಿದ್ದಾರೆ.
ಜೈಲಿನ ಅಧಿಕಾರಿಗಳೇ ಹಣಕ್ಕಾಗಿ ಕೈದಿಗಳಿಗೆ ಮೊಬೈಲ್, ನಿಷೇಧಿತ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ ಎಂದು ಯುವಕನೊಬ್ಬ ವಿಡಿಯೋ ಮೊಲಕ ಮಾಹಿತಿ ನೀಡಿದ್ದಾನೆ.
ತುಮಕೂರು ಮೂಲದ ಸಾಯಿಕುಮಾರ್ ಎಂಬ ಯುವಕ 2024ರಲ್ಲಿ ಹಿಂಡಲಗಾ ಜೈಲಿನಲ್ಲಿ ಕೈದಿಯಾಗಿದ್ದ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿದ್ದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಿಂದಲಗಾ ಜೈಲಿನಲ್ಲಿ ವೇಶ್ಯಾವಾಟಿಕೆ ಎಗ್ಗಿಲ್ಲದೇ ನಡೆಯುತ್ತದೆ ಎಂದು ಯುವಕ ಆರೋಪಿಸಿದ್ದಾನೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ನಮ್ಮ ಮೇಲೆ ಸುಳ್ಳು ಕೇಸ್ ಹಾಕುತ್ತಾರೆ. ಅಧಿಕಾರಿಗಳೇ ಜೈಲಿನಲ್ಲಿ ಮೊಬೈಲ್, ಗಾಂಜಾ, ಮಾದಕ ವಸ್ತುಗಳನ್ನು ಸಪ್ಲೈ ಮಾಡುತ್ತಾರೆ ಎಂದಿದ್ದಾನೆ.
ಅಲ್ಲದೇ ಹಣಕ್ಕಾಗಿ ಕೈದಿಗಳ ಜೊತೆ ಬೆತ್ತಲೆ ವಿಡಿಯೋ ಕಾಲ್ ಮಾಡುವ ಮಹಿಳಾ ಪೊಲೀಸ್ ಅಧಿಕಾರಿಯೊರ್ವಳು ಕಳೆದ ಕೆಲ ತಿಂಗಳ ಹಿಂದೆ ಬೆಳಗಾವಿ ಹಿಂಡಲಗಾ ಜೈಲಿನ ಭದ್ರತಾ ಅಧಿಕಾರಿಯಾಗಿದ್ದಳು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಮಹಿಳೆ ಕೈದಿಗಳ ಜೊತೆ ಅಕ್ರಮ್ ಅಸಂಬಂಧ ಹೊಂಡಿದ್ದಲ್ಲದೇ ನಿಷೇಧಿತ ವಸ್ತುಗಳನ್ನು ಕಳ್ಳ ಮಾರ್ಗದ ಮೂಲಕ ಜೈಲಿನೊಳಗೆ ತಲುಪಿಸುವ ಕೆಲಸ ಮಾಡುತ್ತಿದ್ದಳು.
ಸಹ ಅಧಿಕಾರಿ ಜೊತೆ ಕಿರಿಕ್ ಆಗಿದ್ದರಿಂದ ಈ ಮಹಿಳಾ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಹಿರಿಯ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಪ್ರಕರಣ ಮುಚ್ಚಿ ಹಾಕಲಾಗಿತ್ತು ಎನ್ನಲಾಗಿದೆ.
Laxmi News 24×7