ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸಭೆಯಲ್ಲಿ ಇಂದು ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ನಡೆದ ಚರ್ಚೆಗೆ ಉತ್ತರ ಕೊಡುವಾಗ ಅರಣ್ಯ ಸಚಿವ ರಾಮಲಿಂಗಾರೆಡ್ಡಿ , ಕೇಂದ್ರದ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಕೇಂದ್ರದ ಅಧಿಸೂಚನೆಯನ್ನು ತಿರಸ್ಕರಿಸಲಾಗುತ್ತದೆ ಅಂದ್ರು.
ಕೇಂದ್ರ ಸರ್ಕಾರ ಮತ್ತೆ ಅಧಿಸೂಚನೆ ಹೊರಡಿಸಿರೋದು ಆ ಭಾಗದ ಶಾಸಕರ ತೀವ್ರ ವಿರೋಧಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿಂದು ನಿಯಮ 69 ರಡಿ ಕೇಂದ್ರ ಹೊರಡಿಸಿದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ಶಾಸಕರಾದ ಎ ಎಸ್ ಪೊನ್ನಣ್ಣ, ತಮ್ಮಯ್ಯ, ಟಿ ಡಿ ರಾಜೇಗೌಡ ಚರ್ಚೆ ಮಾಡಿದ್ರು. ಶಾಸಕರು ವರದಿ ಜಾರಿಯಾದರೆ ಏನೆಲ್ಲ ಪರಿಣಾಮ ಆಗಲಿದೆ ಎಂದು ಹಲವು ಆತಂಕಗಳನ್ನು ವ್ಯಕ್ತಪಡಿಸಿದರು. ಸರ್ಕಾರ ಅಧಿಸೂಚನೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.
Laxmi News 24×7