Breaking News

ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ ನೋಟುಗಳ ಅಲಂಕಾರ – ಧನಲಕ್ಷ್ಮಿಯಾಗಿ ಕಂಗೊಳಿಸಿದ ದೇವಿ

Spread the love

ಮಂಡ್ಯ: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ  ತಾಯಿಗೆ ಆಕರ್ಷಕ ‘ಧನಲಕ್ಷ್ಮಿ’ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ದೇವಾಲಯದ ಗರ್ಭಗುಡಿಯನ್ನು ಸಂಪೂರ್ಣವಾಗಿ ನೋಟುಗಳಿಂದ ಸಿಂಗರಿಸಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಭಕ್ತರು ನೀಡಿದ ಕಾಣಿಕೆ ಹಣವಾದ ಸುಮಾರು 3 ಲಕ್ಷ ರೂ. ಬಳಸಿಕೊಂಡು ದೇವಾಲಯದ ಪ್ರಧಾನ ಅರ್ಚಕರಾದ ಲಕ್ಷ್ಮೀಶ ಅವರು ಈ ವೈಭವೋಪೇತ ಅಲಂಕಾರ ಮಾಡಿದ್ದಾರೆ.

varamahalakshmi festival special decoration of currency notes at chamundeshwari temple in srirangapatna 1

10, 20, 50, 100, 200 ಹಾಗೂ 500 ರೂ. ಮುಖಬೆಲೆಯ ಹೊಸ ನೋಟುಗಳನ್ನು ಜೋಡಿಸಿ ಗರ್ಭಗುಡಿ ಮತ್ತು ದೇವಿಯ ಸುತ್ತಲೂ ಕಲಾತ್ಮಕವಾಗಿ ಅಲಂಕರಿಸಲಾಗಿದೆ. ನಾಡಿನಲ್ಲಿ ಕಾಲಕಾಲಕ್ಕೆ ಉತ್ತಮ ಮಳೆ-ಬೆಳೆಯಾಗಿ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಮೃದ್ಧಿ ಸಿಗಲಿ ಎಂದು ಸಂಕಲ್ಪಿಸಿ ದೇವಿಗೆ ವಿಶೇಷ ಅರ್ಚನೆ ಮತ್ತು ಮಹಾಮಂಗಳಾರತಿ ನೆರವೇರಿಸಲಾಯಿತು.

ಧನಲಕ್ಷ್ಮಿ ರೂಪದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಬೆಳಗಿನಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.


Spread the love

About Laxminews 24x7

Check Also

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

Spread the loveಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ