Breaking News

ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌

Spread the love

ಬೆಂಗಳೂರು: 200 ರೂಪಾಯಿ ಕೊಡಲಿಲ್ಲ ಅಂತ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ದೇವಿ ಕೊಲೆಯಾದ ಮಂಗಳಮುಖಿ. ಕೊಲೆ ಆರೋಪಿ ಗೌತಮ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕೊಲೆಯಾಗಿದೆ.

ಚಾಕುವಿನಿಂದ ಮಂಗಳಮುಖಿ ಕುತ್ತಿಗೆ ಸೀಳಿ ಕೊಲೆ ಮಾಡಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರಾಮಮೂರ್ತಿ ನಗರ ನಿವಾಸಿಯಾಗಿರುವ ಗೌತಮ್‌ ರಾಬರಿ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ದರೋಡೆ ಮಾಡುವುದಕ್ಕಾಗಿ ಬಂದಿದ್ದ. ಮಂಗಳಮುಖಿ 200 ರೂ. ಹಣ ಕೊಡದಿದ್ದಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತು

Spread the loveರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ & ಕೊಲೆ ಪ್ರಕರಣದ ಪ್ರಮುಖ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ