Breaking News

SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ

Spread the love

ಬೆಂಗಳೂರು: ರಾಜ್ಯದ ಎಸ್‌ಐಆರ್ ಕರಡು ಪಟ್ಟಿ ಪ್ರಕಟವಾಗಿದ್ದು, 1.7 ಕೋಟಿ ಮತದಾರರು ಎಎಸ್‌ಡಿಡಿಓ ವ್ಯಾಪ್ತಿಯಲ್ಲಿದ್ದಾರೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಎರಡು ಪುಟಗಳ ಪತ್ರ ಬರೆದಿದ್ದಾರೆ.

1.07 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್‌ಡಿಡಿಓ ಎಂದು ಗುರುತಿಸಲಾಗಿದೆ. ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ಗಳನ್ನ ನೀಡಲಾಗುತ್ತಿದೆ. ಈ ಕುರಿತು ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

ನೋಟಿಸ್‌ಗಳನ್ನ ಪಡೆಯುವ ಮತದಾರರಿಗೆ ಈಗ ನೀಡಲಾಗಿರುವ ನೋಟಿಸ್‌ಗೆ ಪ್ರತಿಕ್ರಿಯಿಸಲು ಕನಿಷ್ಠ 3-4 ವಾರಗಳ ಕಾಲಾವಕಾಶ ನೀಡಬೇಕು. ಚುನಾವಣೆ ಹಕ್ಕಿನಿಂದ ಯಾರೂ ಕೂಡ ವಂಚಿತರಾಗಬಾರದು ಅನ್ನೋದೇ ತಮ್ಮ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ.

ಈ ಮಧ್ಯೆ, 27 ಜಿಲ್ಲೆಗಳ ಕಾಂಗ್ರೆಸ್ ಶಾಸಕರ ಜಿಲ್ಲಾವಾರು ಸಭೆ ನಡೆಸಿದ ಸಿಎಂ, ಎಸ್‌ಐಆರ್ ಬಗ್ಗೆ ವಿಶೇಷ ಗಮನ ಕೊಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ