Breaking News

ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್

Spread the love

ಹಾವೇರಿ: ಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ರಾಣೇಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ.

ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಹಾಗೂ ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು.

ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಸ್ಥಳ ಮಹಜರು ನಡೆಸಿ, ಸಂಬಂಧಿಸಿದ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಕೃಷ್ಣಾಪುರ ಮತ್ತು ತರೇದಹಳ್ಳಿ ಗ್ರಾಮದ ವೆಂಕಟೇಶ್ವರ ಹ್ಯಾಚರೀಸ್ ಪ್ರೈವೇಟ್ ಲಿಮಿಟೆಡ್‌ನಿಂದ 382 ಕೆಜಿ ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ. ಹನುಮನಹಳ್ಳಿ ಗ್ರಾಮದ ವೆಸ್ಟ್‌ವಿಂಡ್ ಫುಡ್ ಪ್ರೊಸೆಸಿಂಗ್‌ನಿಂದ 651 ಕೆಜಿ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.

ಒಟ್ಟು 1,033 ಕೆಜಿ ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಆಹಾರ ಉದ್ದಿಮೆದಾರರು ನೋಟಿಸ್‌ಗೆ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರಭಾರ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂಕಿತ ಅಧಿಕಾರಿ ಕುಮಾರಿ ಕಲ್ಯಾಣಿ ಕಾಂಬಳೆ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the loveಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ