Breaking News

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು

Spread the love

ಚಿಕ್ಕಮಗಳೂರು: ಜೂಜು ಅಡ್ಡೆ ಮೇಲೆ ಪೊಲೀಸರು  ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ.

ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರಮೇಶ್‌ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಜಾರಿಬಿದ್ದು, ತಲೆಗೆ ಬಂಡೆ ಬಡಿದು ಸಾವನ್ನಪ್ಪಿದ್ದಾನೆ.

ರಮೇಶ್ ಕಳೆದ ರಾತ್ರಿ ಮನೆಗೆ ಹೋಗದ ಕಾರಣ ಮನೆಯವರು ಕೂಡ ಆತಂಕಕ್ಕೀಡಾಗಿದ್ದರು. ಇಂದು (ಆ.29) ಹುಡುಕಾಡುವಾಗ ಗ್ರಾಮದಂಚಿನ ಅರಣ್ಯ ಪ್ರದೇಶದಲ್ಲಿ ತಲೆಯಿಂದ ರಕ್ತಸ್ರಾವವಾಗಿ ರಮೇಶ್ ಮೃತದೇಹ ಪತ್ತೆಯಾಗಿತ್ತು. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯದಿಂದ ಓಡಿಹೋದ ಏಳು ಜನರಲ್ಲಿ ಮೃತ ರಮೇಶ್ ಇದ್ದನೋ,‌ಇಲ್ಲವೋ ಎಂಬ ಆಧಾರದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ‌ವಶಕ್ಕೆ ಪಡೆದ ಇಬ್ಬರು ಆತ ಇದ್ದನೆಂದು ಹೇಳಿದ್ದಾರಂತೆ.


Spread the love

About Laxminews 24x7

Check Also

ಅ.3 ಮತ್ತು 4ರಂದು ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್ ಸೀಸನ್–04’: ಸಚಿವ ಸತೀಶ್ ಜಾರಕಿಹೊಳಿ

Spread the love  ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ನಾಲ್ಕನೇ ಬಾರಿಗೆ ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್’ ಆಯೋಜಿಸಲಾಗುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ