ಬೆಂಗಳೂರು: ಧರ್ಮದ ಬಗ್ಗೆ ಪ್ರೀತಿಯಿದ್ದರೆ ಅದನ್ನು ಮನಸಿನಲ್ಲಿಟ್ಟುಕೊಳ್ಳಬೇಕು ಅಂತ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆಗೆ ಜೆಡಿಎಸ್ MLC ಭೋಜೇಗೌಡ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪ್ರೀತಿ ತೋರಿಸಬೇಕಾದ್ರೆ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಪ್ರೀತಿಯನ್ನು ತೋರ್ಪಡಿಸುವ ಅಗತ್ಯವಿಲ್ಲ. ರಾಜಕೀಯ ಹೇಳಿಕೆ ಕೊಡುವಾಗ ರಾಯರೆಡ್ಡಿ ಬಾಲಿಶ ಹೇಳಿಕೆ ಕೊಡಬಾರದು ಎಂದು ಗುಡುಗಿದ್ದಾರೆ.
ಯಾವುದೇ ಧರ್ಮವನ್ನು ಓಲೈಸುವ ಅಗತ್ಯವಿಲ್ಲ. 1985ರಲ್ಲೇ ಮಂತ್ರಿಯಾದ ನಿಮಗೆ ಅಗಾಧ ಅನುಭವವಿದೆ. ನಿಮ್ಮ ಹೇಳಿಕೆಯಿಂದ ಹಿಂದೂಗಳಿಗೆ ಸಹಜವಾಗಿ ನೋವು ಉಂಟು ಮಾಡುತ್ತಿದೆ. ನಾನು ನಿನ್ನೆ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಗಿದ್ದೆ. ಶ್ರೇಷ್ಠವಾದ ಧರ್ಮ ಅಂತಾ ಯಾವ ಆಧಾರ ಮೇಲೆ ಹೇಳಿದ್ರಿ. ಶ್ರೇಷ್ಠ ಧರ್ಮ ಅಂತ ಹೇಳಿದಿರಲ್ಲ ನಿಮ್ಮ ತಂದೆ ತಾಯಿಗೆ ಕೇಳಿ ಅವ್ರು ನಿಮ್ಮ ಹೇಳಿಕೆ ಒಪ್ಪುತ್ತಾರಾ ಕೇಳಿ. ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಬಾಯಿ ಚಪಲಕ್ಕೆ ಏನು ಬೇಕಾದ್ರೂ ಹೇಳಬಹುದು ಅಂತ ರಾಯರೆಡ್ಡಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
Laxmi News 24×7