Breaking News

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು

Spread the love

ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ  ಶಾಲಾ ಮುಖ್ಯ ಶಿಕ್ಷಕ  ಸಾವನ್ನಪ್ಪಿದ ಘಟನೆ ಧಾರವಾಡ  ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಐಐ ಮುಲ್ಲಾನವರ್ (59) ಹೃದಯಾಘಾತದಿಂದ ಸಾವನ್ನಪ್ಪಿದ ಮುಖ್ಯ ಶಿಕ್ಷಕ. ಕಳೆದ ಎರಡು ದಿನಗಳ ಹಿಂದೆ ಶುಕ್ರವಾರ ಶಾಲೆಯಲ್ಲಿ ಇದ್ದಾಗಲೇ ಹೃದಯಾಘಾತವಾಗಿತ್ತು. ಈ ವೇಳೆ ಶಾಲೆಯಲ್ಲಿ ಇದ್ದ ಶಿಕ್ಷಕರು ಮುಖ್ಯ ಶಿಕ್ಷಕ ಮುಲ್ಲಾನವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ.

ಶುಕ್ರವಾರ ಸಂಜೆ ಮುಖ್ಯ ಶಿಕ್ಷಕ ಸಾವನ್ನಪ್ಪಿದ ಹಿನ್ನೆಲೆ ಶಿಕ್ಷಕರ ದಿನಾಚರಣೆ ದಿನವೇ ಮುಲ್ಲಾನವರ ಕುಟುಂಬದವರು ಅವರ ಅಂತ್ಯಕ್ರಿಯೆ ಮಾಡಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ