Breaking News

ಎಸ್‌ಸಿ ಸಮುದಾಯ ಮೀಸಲಾತಿಗೆ ಮಡಿವಾಳ ಜನಾಂಗ ಸೇರಿಸಲು ಒತ್ತಾಯ

Spread the love

ಚಿಕ್ಕಬಳ್ಳಾಪುರ: ಮಡಿವಾಳ ಜನಾಂಗವನ್ನ  ಪರಿಶಿಷ್ಠ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಎಸ್‌ಸಿ ಹೋರಾಟ ಸಮಿತಿ ವತಿಯಿಂದ ಬೃಹತ್‌ ರ‍್ಯಾಲಿ ನಡೆಸಲಾಯಿತು.

ನಗರದ ಅಂಬೇಡ್ಕರ್‌ ಭವನದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದವರೆಗೂ ಮಡಿವಾಳ ಸಮುದಾಯದವರು ಬೃಹತ್‌ ರ‍್ಯಾಲಿ ನಡೆಸುವ ಮೂಲಕ ಆಗ್ರಹಿಸಲಾಯಿತು.

ದೇಶದ 20 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಮಡಿವಾಳರ ಸ್ಥಿತಿಗತಿ ಅಧ್ಯಯನಕ್ಕೆ ಮಾನವ ಶಾಸ್ತ್ರಜ್ಞ ಪ್ರೊ. ಅನ್ನಪೂರ್ಣಮ್ಮ ಅವರನ್ನ ನೇಮಿಸಿದ್ದು ವರದಿ ಪಡೆಯಲಾಗಿದೆ. ವರದಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿಸಲು ಅರ್ಹರು ಎಂಬ ಅಂಶ ಉಲ್ಲೇಖವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಮಡಿವಾಳ ಜನಾಂಗವನ್ನ ಪರಿಶಿಷ್ಟ ಜಾತಿಗೆ ಓಳಪಡಿಸುವಂತೆ ಆಗ್ರಹಿಸಲಾಯಿತು.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ