Breaking News

ಬೆಳಗಾವಿಯಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ

Spread the love

ಬೆಳಗಾವಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ, ಅಥಣಿ ಹಾಗೂ ಹುಕ್ಕೇರಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೆ ಅಂತರರಾಜ್ಯ ಮಾರ್ಗಗಳಿಗೆ ಸೆಪ್ಟೆಂಬರ್ 11 ರಿಂದ 25 ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಅಷ್ಟೇ ಅಲ್ಲದೇ ಗಣೇಶ ಹಬ್ಬ ಆಚರಿಸಲು ಬರುವ ಪ್ರಯಾಣಿಕರಿಗಾಗಿ ವಿಭಾಗದ ಎಲ್ಲ ಘಟಕಗಳಿಂದ ಸೆಪ್ಟೆಂಬರ್ 11 ಮತ್ತು 12 ರಂದು ಹೆಚ್ಚುವರಿ ವಾಹನಗಳನ್ನು ಬೆಂಗಳೂರಿನಿಂದ ವಿಭಾಗದ ತಾಲೂಕು ಕೇಂದ್ರಗಳಿಗೆ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರು ಈ ವಿಶೇಷ ಸಾರಿಗೆಗಳ ಪ್ರಯೋಜನ ಪಡೆಯಬಹುದು ಎಂದು ವಾಕರಸಾಸಂಸ್ಥೆ, ಚಿಕ್ಕೋಡಿ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ