ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಳುಗರೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಸಂಗೀತ ನೀಡಿರುವ ಸಿನಿಮಾಗಳು ಚೆನ್ನಾಗಿಲ್ಲ ಎಂದು ಹೇಳಲಾರೆ. ನನ್ನ ವಿರುದ್ಧ ಷಡ್ಯಂತ್ರ ರಚಿಸುತ್ತಿದ್ದ ಗುಂಪು ತಪ್ಪು ಸಂದೇಶಗಳನ್ನು ರವಾನಿಸುತ್ತಿತ್ತು. ನನ್ನ ಬಗ್ಗೆ ಅಪಪ್ರಚಾರ ಮಾಡೋದರಲ್ಲಿ ಆ ಗುಂಪು ಕೆಲಸ ಮಾಡುತ್ತಿತ್ತು. ಒಮ್ಮೆ ಮುಖೇಶ್ ಛಾಬ್ರಾ ಹಾಡುಗಳಿಗಾಗಿ ನನ್ನ ಬಳಿ ಬಂದಿದ್ದರು. ಎರಡು ದಿನಗಳಲ್ಲಿ ನಾಲ್ಕು ಹಾಡುಗಳನ್ನು ನೀಡಿದೆ. ನನ್ನ ಜೊತೆ ಮಾತನಾಡುತ್ತಾ, ನಿಮ್ಮ ಬಳಿ ಹೋಗಬಾರದು ಅಂತ ಹಲವರು ಒತ್ತಡ ಹಾಕಿರುವ ವಿಷಯ ತಿಳಿಸಿದರು. ಇದನ್ನೂ ಓದಿ:
ಅಂದು ದೀಪಕ್ ಛಾಬ್ರಾ ಮಾತು ಕೇಳಿದಾಗ ಇದೇ ಕಾರಣಕ್ಕೆ ನಾನು ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಕೆಲಸ ಮಾಡಲು ಆಗಲಿಲ್ಲ ಎಂಬ ವಿಷಯ ಮನವರಿಕೆ ಆಯ್ತು. ಒಂದು ಗುಂಪು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದ ಪರಿಣಾಮ ಕಡಿಮೆ ಬಜೆಟ್ ಚಿತ್ರ (ಡಾರ್ಕ್ ಮೂವಿ)ಗಳಿಗೆ ಸಂಗೀತ ನೀಡಿದ್ದೇನೆ. ಅವರು ತಮಗೆ ಗೊತ್ತಿಲ್ಲದೇ ಬೇರೆಯವರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚೆಗೆ ನಿಧನವಾಗಿರುವ ಸುಶಾಂತ್ ಸಿಂಗ್ ರಜಪೂತ್ ನಟನೆಯ ದಿಲ್ ಬೇಚೇರಾ ಸಿನಿಮಾದ ಹಾಡಿಗೆ ಸಂಗೀತ ಸಂಯೋಜನೆ ಮಾಡಲು ರೆಹಮಾನ್ ಒಪ್ಪಿಕೊಂಡಿದ್ದಾರೆ.