Breaking News

ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವು

Spread the love

ಹಾಸನ: ಹೃದಯಾಘಾತದಿಂದ  ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ  ಪಟ್ಟಣದಲ್ಲಿ ನಡೆದಿದೆ‌.

ಡಾ.ವೆಂಕಟೇಶ್ (55) ಮೃತಪಟ್ಟ ಅಧಿಕಾರಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರಾದ ಡಾ.ವೆಂಕಟೇಶ್ ಕಳೆದ ಐದಾರು ವರ್ಷಗಳಿಂದ ಸಕಲೇಶಪುರದಲ್ಲಿ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಂಗಳೂರಿನಲ್ಲಿ ಡಾ.ವೆಂಕಟೇಶ್ ಕುಟುಂಬ ನೆಲೆಸಿದ್ದು, ಸಕಲೇಶಪುರದಲ್ಲಿ ಒಬ್ಬರೇ ವಾಸವಿದ್ದರು.‌ ಸೆ.10 ರಂದು ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಬೆಳಿಗ್ಗೆ ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ನೋಡಿದಾಗ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದಿದೆ. ಡಾ.ವೆಂಕಟೇಶ್ ಸಾವಿಗೆ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ