Breaking News

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the love

ಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು  ಮಾಡಿದ್ದಾರೆ.

ಬೆಂಗಳೂರಿನಲ್ಲಿ  ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ತಮ್ಮ ಮಾತು ಈ ಸರ್ಕಾರದಲ್ಲಿ ನಡೆಯುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರದಲ್ಲಿ ಅವರ ಮಾತು ನಡೆಯುತ್ತಿದೆಯೋ ಇಲ್ಲವೋ ನನಗೇನು ಗೊತ್ತು. ಸಿದ್ದರಾಮಯ್ಯ ಅವರ ಭಾವನೆ ಅವರು ಹೇಳಿಕೊಂಡಿದ್ದಾರೆ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ನಿಮಗೆ ಗೊತ್ತು. ಈ ಸರ್ಕಾರ ಹೇಗಿದೆ ಎಂದರೆ ಹಿಂದಿನ ಕಾಲದಲ್ಲಿ ಜಾಗಟೆ ಹೊಡೆದುಕೊಂಡು ಹೋಗ್ತಾ ಇದ್ದರು ಈ ಸರ್ಕಾರವೂ ಹಾಗೆ. ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಈ ಸರ್ಕಾರದಲ್ಲಿ ಎಂದು ಲೇವಡಿ ಮಾಡಿದರು.

ದೇವೇಗೌಡರ  ಮುಖ ನೋಡಿ ಒಕ್ಕಲಿಗರು ಮತ ಹಾಕ್ತಾರೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ, ರಾಜಣ್ಣ  ಅವರ ಭಾವನೆ ಹೇಳಿದ್ದಾರೆ. ಅವರ ಹೇಳಿಕೆ ಅತಿಶಯೋಕ್ತಿಯಲ್ಲ. ಒಕ್ಕಲಿಗ ಸಮಾಜ 30-40 ವರ್ಷಗಳಿಂದ ದೇವೇಗೌಡರ ಹೋರಾಟರ ಹಿನ್ನಲೆಯಲ್ಲಿ ನಮ್ಮ ಭಾಗದಲ್ಲಿ, ನಮ್ಮ ಸಮಾಜ, ನಮ್ಮ ಪಕ್ಷಕ್ಕೆ ಬೆಂಬಲ ಕೊಟ್ಟಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯ ಸರ್ಕಾರ ಮೊದಲು ಬರ ಪರಿಹಾರ ಘೋಷಿಸಿ, ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಲಿ: ಪಿ.ಸಿ ಮೋಹನ್

Spread the loveಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಜನಹಿತದ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ ಎಂದು ಸಂಸದ ಪಿ.ಸಿ ಮೋಹನ್  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ