Breaking News

ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ

Spread the love

ಬಾಗಲಕೋಟೆ: ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದಲ್ಲಿ ನಡೆದಿದೆ.

ಇಬ್ಬರೂ ಕೊರೊನಾ ಸೋಂಕಿನಿಂದ ಬಿಡುಗಡೆ ಆಗಿದ್ದಕ್ಕೆ ಊರಲ್ಲಿ ಅಭಿಮಾನಿಗಳಿಂದ ಸಂಭ್ರಮ ಎಂಬ ಹುಚ್ಚಾಟ ನಡೆದಿದೆ. ಕೋವಿಡ್‍ನಿಂದ ಗುಣಮುಖ ಆಗಿ ಬಂದಿದ್ದಕ್ಕೆ ಇಬ್ಬರಿಗೆ ಅದ್ಧೂರಿ ಸ್ವಾಗತ ಕೋರಿದ್ದಲ್ಲದೇ ಗುಂಪು ಗುಂಪು ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಜೊತೆಗೆ ಗಲ್ಲಿಯಲ್ಲಿ ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಹಾಡಿದ್ದಾರೆ.

ಇದಲ್ಲದೇ ಗುಣಮುಖರಾದವರಿಗೆ ಅಪ್ಪಿಕೊಂಡು ಶುಭಾಶಯ ವಿನಿಮಯ ಮಾಡಿದ್ದಾರೆ. ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಬಳಿಕ ಗುಣಮುಖರಾದವರು ಹೋಂ ಕ್ವಾರಂಟೈನ್ ಆಗಬೇಕು. ಅಲ್ಲದೇ ಸೋಂಕು ಪತ್ತೆಯಾದ ಐದನೇ ದಿನಕ್ಕೆ ಇವರಿಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೆಲ್ಲ ತಿಳಿದೂ ಬೆಂಬಲಿಗರು ಪಟಾಕಿ ಸಿಡಿಸಿ, ಅಪ್ಪಿಕೊಂಡು, ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ