Breaking News

ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

Spread the love

ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದಿರುವುದು ದಾಳಿ ವೇಳೆ ಪತ್ತೆಯಾಗಿದೆ. ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ಸೋಂಕಿತ ಬ್ಯಾಂಕ್ ಖಾತೆಗೆ ಮರಳಿ ಜಮೆ ಮಾಡುವಂತೆ ಅಧಿಕಾರಿಗಳು ಆಸ್ಪತ್ರೆಗೆ ಸೂಚಿಸಿದ್ದಾರೆ. ಅಲ್ಲದೆ ಸೋಂಕಿತರಿಂದ ಹೆಚ್ಚುವರಿ ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ