Breaking News
Home / ಜಿಲ್ಲೆ / ಕೊಪ್ಪಳ / ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದ ಆರೋಗ್ಯ ಇಲಾಖೆ

ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದ ಆರೋಗ್ಯ ಇಲಾಖೆ

Spread the love

ಕೊಪ್ಪಳ: ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳುವ ಮೂಲಕ ಅಮಾನವೀಯವಾಗಿ ವರ್ತಿಸಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರ ಗ್ರಾಮದ ನಿವಾಸಿಗೆ ಸಿಬ್ಬಂದಿ ಕೊರೊನಾ ಇರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ ಮನೆಗೆ ನಡೆದುಕೊಂಡು ಹೋಗಿ ಎಂದು ಹೇಳಿ ಕಳಿಸಿದ್ದಾರೆ ಎಂದು ಸೋಂಕಿತ ಆರೋಪಿಸುತ್ತಿದ್ದಾರೆ.

ಮುದೇನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಈ ರೀತಿ ಅಮಾನವಿಯ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಿಕೊಂಡ ಸೋಂಕಿತ, ಅವರ ಮಾತಿನಂತೆ ನಾಲ್ಕು ಕಿಲೋಮೀಟರ್ ನಡೆದುಕೊಂಡೇ ಹೊರಟಿದ್ದಾನೆ. ಊಟ-ತಿಂಡಿ ಇಲ್ಲದೆ ಆಯಾಸಪಟ್ಟು ಸೋಂಕಿತ ರಸ್ತೇ ಪಕ್ಕದ ಹಳ್ಳದಲ್ಲಿದ್ದ ನೀರು ಕುಡಿದು ನಡೆದುಕೊಂಡೇ ಮನೆಗೆ ಹೋದೆ. ಸ್ಥಳೀಯರು ಕುಡಿಯಲು ನೀರು ಸಹಾಯ ಮಾಡಿದ್ದಾರೆ ಎಂದು ಸೋಂಕಿತ ಹೇಳಿದ್ದಾರೆ.


Spread the love

About Laxminews 24x7

Check Also

ಆಗಸ್ಟ್​ ತಿಂಗಳೊಳಗೆ ಐದೂ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ

Spread the love ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ