Breaking News

ಕರೋನಾದೊಂದಿಗೆ ‘ಹೇಗೆ ಬದುಕಬೇಕು’ ಎಂದು ಕಲಿಯಬೇಕು, ದೀರ್ಘಕಾಲೀನ ಲಾಕ್‌ಡೌನ್ ಸರಿಯಲ್ಲ: ಗಡ್ಕರಿ

Spread the love

ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಿಂತ ದೀರ್ಘಕಾಲದ ಲಾಕ್‌ಡೌನ್ ಹೆಚ್ಚು ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವೈರಸ್ ಅನ್ನು ಎದುರಿಸಲು ‘ಹೇಗೆ ಬದುಕಬೇಕು’ ಎಂದು ಕಲಿಯಲು ಅವರು ಸಲಹೆ ನೀಡಿದರು.

ಕರೋನಾದೊಂದಿಗೆ 'ಹೇಗೆ ಬದುಕಬೇಕು' ಎಂದು ಕಲಿಯಬೇಕು, ದೀರ್ಘಕಾಲೀನ ಲಾಕ್‌ಡೌನ್ ಸರಿಯಲ್ಲ: ಗಡ್ಕರಿ

ಮುಂಬೈ: ದೀರ್ಘಕಾಲದ ಲಾಕ್‌ಡೌನ್ (Lockdown) ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಿಂತ ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂದು ತಿಳಿಸಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಕರೋನಾದೊಂದಿಗೆ ‘ಹೇಗೆ ಬದುಕಬೇಕು’ ಎಂದು ಕಲಿಯಬೇಕು ಎಂದು ಸಲಹೆ ನೀಡಿದ್ದಾರೆ.

ಸಾಂಕ್ರಾಮಿಕ ರೋಗವು ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಜನರ ಸುರಕ್ಷತೆ ಮತ್ತು ಆರ್ಥಿಕತೆಯ ನಡುವೆ ಸಮತೋಲನವನ್ನು ಸಾಧಿಸುವ ಅವಶ್ಯಕತೆಯಿದೆ ಎಂದವರು ತಿಳಿಸಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಹಸಿದ ಹೊಟ್ಟೆಗೆ ಯಾವುದೇ ತತ್ವಶಾಸ್ತ್ರವು ಉಪಯುಕ್ತವಲ್ಲ. ಕೋವಿಡ್ -19 (Covid-19)  ಜೊತೆಗೆ ಹೇಗೆ ಬದುಕಬೇಕು ಎಂಬುದನ್ನು ನಾವು ಕಲಿಯಬೇಕಾಗಿದೆ. ನಮ್ಮನ್ನು ರಕ್ಷಿಸಿಕೊಳ್ಳಲು ಮತ್ತು ಆರ್ಥಿಕತೆಯನ್ನು ವೇಗಗೊಳಿಸಲು ನಾವು ಸಮತೋಲನವನ್ನು ಸಾಧಿಸಬೇಕಾಗಿದೆ ಎಂದು ಕರೆ ನೀಡಿದರು.

ಆದಾಯವೂ ಕಡಿಮೆಯಾಗಿದೆ ಎಂದು ಅವರು ಒಪ್ಪಿಕೊಂಡರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ