ಬೆಂಗಳೂರು; ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಒಟ್ಟು 37 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಅಂದರೆ ಈ 37 ಮಂದಿಯಲ್ಲಿ 19 ಮಂದಿ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ
ಇನ್ನು ವಿಶೇಷ ಅಂದರೆ ಇದೇ ಅಕಾಡೆಮಿಯಿಂದ ತೇರ್ಗಡೆಯಾದ ಯುಪಿಎಸ್ಸಿ ಪರೀಕ್ಷೆಯಲ್ಲಿ 465ನೇ ರ್ಯಾಂಕ್ ಪಡೆದಿರುವ ಮೇಘನಾ ಎಂಬುವವರಿಗೆ ಪೂರ್ಣಪ್ರಮಾಣದಲ್ಲಿ ಕಣ್ಣು ಕಾಣುವುದಿಲ್ಲ. ಮೂಲತಃ ಮೈಸೂರು ಜಿಲ್ಲೆಯ ಪರಿಯಾಪಟ್ಟಣದವರಾದ ಮೇಘನಾ ಅವರು ತಮ್ಮ ಅಂಗವೈಕಲ್ಯ ಸಮಸ್ಯೆಯನ್ನು ಮೆಟ್ಟಿ ನಿಂತು ಯುಪಿಎಸ್ಸಿ ಪರೀಕ್ಷೆಯಲ್ಲಿ ಈ ಸಾಧನೆ ಮಾಡುವ ಮೂಲಕ ಎಲ್ಲರಿಗೂ ಸ್ಫೂರ್ತಿದಾಯಕವಾಗಿದ್ದಾರೆ.
ಹಾಗೆಯೇ 167ನೇ ರ್ಯಾಂಕ್ ಪಡೆದಿರುವ ಬೆಂಗಳೂರಿನ ಕೀರ್ತನಾ ಎಂಬುವವರು ಶಿವರಾಜ್ ಕುಮಾರ್ ಹಾಗೂ ಮಾಲಾಶ್ರೀ ಅಭಿನಯದ ಗಂಗಾ ಯಮುನಾ ಸಿನಿಮಾದಲ್ಲಿ ಹಾಗೂ ದೊರೆ ಚಿತ್ರದಲ್ಲೂ ಬಾಲನಟಿಯಾಗಿ ಅಭಿನಯಿಸಿದ್ದಾರೆ. ಇದೀಗ ಇವರು ದೇಶದ ಅತ್ಯುನ್ನತ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ನಾಗರಿಕ ಸೇವೆಗೆ ಸಿದ್ದರಾಗಿದ್ದಾರೆ.
ಡಾ.ರಾಜ್ಕುಮಾರ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಯುಪಿಎಸ್ಸಿ ತೇರ್ಗಡೆಯಾದವರು
- ಕೀರ್ತನಾ 167
- ಅಭಿಷೇಕ್ 278
- ಕೃತಿ 297
- ವೆಂಕಟಕೃಷ್ಣ ಎಸ್ 336
- ಮಿಥುನ್ ಎಚ್.ಎನ್ 359
- ವೆಂಕಟರಮಣ ಕೆ 363
- ಕೌಶಿಕ್ ಎಚ್.ಆರ್. 380
- ಆನಂದ ಕಲ್ಲಡಗಿ 446
- ಮೇಘನಾ 465
- ವಿವೇಕ್ ರೆಡ್ಡಿ 485
- ವರುಣ್ ಕೆ. ಗೌಡ 528
- ಪ್ರಫುಲ್ ದೇಸಾಯಿ 532
- ಭರತ್ ಕೆ.ಆರ್. 545
- ಹರ್ಶಿಲ್ ಮೀನಾ 548
- ಸುಹಾಸ್ ಆರ್ 583
- ರಾಮಚಂದ್ರ ಜೆ 605
- ಪ್ರಜ್ವಲ್ 636
- ಚಂದನ್ ಜಿ.ಎಸ್. 777
- ಮಂಜೇಶ್ ಕುಮಾರ್ 800