Home / ಜಿಲ್ಲೆ / ಉಡುಪಿ / ದುರ್ಗಾಪರಮೇಶ್ವರಿಗೆ ನದಿ ನೀರ ಅಭಿಷೇಕ- ಕಮಲಶಿಲೆ ದೇಗುಲದೊಳಕ್ಕೆ ಹರಿದ ಕುಬ್ಜಾ ನದಿ

ದುರ್ಗಾಪರಮೇಶ್ವರಿಗೆ ನದಿ ನೀರ ಅಭಿಷೇಕ- ಕಮಲಶಿಲೆ ದೇಗುಲದೊಳಕ್ಕೆ ಹರಿದ ಕುಬ್ಜಾ ನದಿ

Spread the love

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ಹರಿದಿದೆ. ಕುಬ್ಜಾ ನದಿ ತೀರದಲ್ಲಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗಾ ದೇವಿಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಈ ಬಾರಿಯೂ ಸಂಪ್ರದಾಯ ಮುಂದುವರಿದಿದೆ.

ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ. ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ ಪ್ರವೇಶ ಮಾಡಿದ ಸಮಯದಲ್ಲಿ ಊರಿನ ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ಮಹಾಮಾರಿ ಇರುವ ಕಾರಣ ದೇವಾಲಯದ ಆಸುಪಾಸಿನ ಒಂದಷ್ಟು ಕುಟುಂಬಗಳು ಮಾತ್ರ ಈ ವಿಶೇಷ ಸಂದರ್ಭದಲ್ಲಿ ದೇವರ ದರ್ಶನ ಗೈದರು.

ಪಶ್ಚಿಮ ಘಟ್ಟದ ತಪ್ಪಲಲ್ಲಿ ಭಾರೀ ಮಳೆಯಾದರೆ ನದಿನೀರು ಉಡುಪಿಯತ್ತ ಹರಿಯುತ್ತದೆ. ಕುಬ್ಜಾ ತುಂಬಿ ಹರಿಯುತ್ತದೆ. ಈ ಪುಣ್ಯ ಕಾಲದಲ್ಲಿ ಕುಬ್ಜಾ ನದಿ ಸ್ನಾನ ಬಹಳಷ್ಟು ಪರಿಣಾಮಕಾರಿ ಎಂಬ ಪ್ರತೀತಿ ಇದೆ. ಕಮಲಶಿಲೆಯಲ್ಲಿ ದುರ್ಗೆ ಲಿಂಗ ರೂಪದಲ್ಲಿ ನೆಲೆನಿಂತಿದ್ದಾಳೆ ಎಂಬ ನಂಬಿಕೆ ಇದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ