Breaking News

ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದೆ.

Spread the love

ಬೆಳಗಾವಿ: ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡ ಘಟನೆ  ನಗರದಲ್ಲಿ ಬಸವನಗಲ್ಲಿಯಲ್ಲಿ ನಡೆದಿದೆ.

 ಮಹಾವೀರ ಕೊಟಾರಿ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಜಿಲ್ಲೆಯಾದ್ಯಂತ ಮಳೆಯಿಂದ  ಪ್ರವಾಹದ ಭೀತಿ ಉಂಟಾಗಿದೆ. ನಗರದ ರಸ್ತೆ ಜಲಾವೃತವಾಗಿದ್ದು, ನೀರುತುಂಬಿದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಹಾಗೂ ಖಾನಾಪೂರದ ಕೆಲ ಬಡಾವಣೆಗಳಿಗೂ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನರು ಮನೆಯಿಂದ ನೀರು ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ