Breaking News

ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ಧರಾಮಯ್ಯ

Spread the love

ಬೆಂಗಳೂರು:  ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಆಸ್ಪತ್ರೆಯಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ಸರಣಿ ಟ್ವಿಟ್ ಗಳ ಮೂಲಕ ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿರುವ  ಸಿಎಂ ಯಡಿಯೂರಪ್ಪ  ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ  ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಎಕ್ಸಲ್ ಕಟ್ ಆಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Spread the loveರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ