Breaking News

ರಸ್ತೆಯ ಮೇಲೆ ನೀರಿನ ಸೆಳೆತಕ್ಕೆ ಬೈಕ್ ಸಮೇತವಾಗಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ್ದಾರೆ.

Spread the love

ಬೆಳಗಾವಿ:  ಚಿಕ್ಕೋಡಿ ತಾಲ್ಲೂಕಿನ ಸದಲಗಾ ಬೋರ್ ಗಾಂವ ರಸ್ತೆಯ ಮೇಲೆ ನೀರಿನ ಸೆಳೆತಕ್ಕೆ ಬೈಕ್ ಸಮೇತವಾಗಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ಗುರುವಾರ ರಕ್ಷಣೆ ಮಾಡಿದ್ದಾರೆ.

ರಸ್ತೆಯ ಮೇಲೆ ನೀರಿನ ಹರಿವು ಹೆಚ್ಚಳವಿತ್ತು, ಆದ್ರು ವ್ಯಕ್ತಿ ದ್ವಿಚಕ್ರ ವಾಹನದೊಂದಿಗೆ ಹೊರಟ್ಟಿದ್ದನು. ಸಾಗುತ್ತಿರುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಬೈಕ್ ಸಮೇತವಾಗಿ ವ್ಯಕ್ತಿ ಕೊಚ್ಚಿ ಹೋಗುತ್ತಿದ್ದನು. ತಕ್ಷಣ ಗಮನಿಸಿದ ಸ್ಥಳೀಯ ಯುವಕರು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ  ಬಿರುಸಿನ ಮಳೆ ಆರಂಭವಾಗಿರುವುದರಿಂದ ಸೇತುವೆ ಸಂಪೂರ್ಣ ಮುಳುಗಡೆಗೊಂಡಿವೆ. ಇನ್ನೂ ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿರುವುದರಿಂದ ಇಂತಹ ಅನಾಹುತಕ್ಕೆ ಕಾರಣವಾಗುತ್ತಿವೆ.  ಈ ಹಿನ್ನೆಲೆಯಲ್ಲಿ ನದಿಯ ಪಾತ್ರದ ಜನರು ಎಚ್ಚರಿಕೆ ವಹಿಸಬೇಕಾಗಿರುವದು ಅವಶ್ಯವಾಗಿದೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ