Breaking News

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ!:

Spread the love

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ!

ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ, ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ರೈತರ ಬೆಳೆಗೆ ನ್ಯಾಯಯುತ ದರ ಒದಗಿಸಲು ಹೆಚ್ಚು ಸಹಕಾರಿಯಾಗಲಿದೆ. ಹಾಗೂ ದೇಶದ ಮೂಲೆ‌ಮೂಲೆಗಳಿಗೆ ಕೃಷಿ ಉತ್ಪನ್ನಗಳ ಸುಗಮ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು ಸಾಧ್ಯವಾಗಲಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪಿಯುಷ್ ಗೋಯಲ್, ಕೃಷಿ ರಾಜ್ಯ ಸಚಿವರಾದ ಶ್ರೀ ಕೈಲಾಶ್ ಚೌಧರಿ, ಶ್ರೀ ದೇವೇಂದ್ರ ಫಡ್ನವೀಸ್, ಶ್ರೀ ಛಗನ್ ಭುಜಬಲ್, ಸಂಸದರಾದ ಶ್ರೀ ಭಾರತಿ ಪವಾರ್, ಶ್ರೀ ಹೇಮಂತ್ ಗೋಡ್ಸೆ, ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ