ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

Laxmi News 24×7