Breaking News

ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ.

Spread the love

ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ.

ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್  ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ‌   ( 18) ಎಂಬ ಯುವಕ  ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು.

ವಿಷಯ ತಿಳಿದ  ಬಳಿಕ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು  ಶವ ಶೋಧ ಕಾರ್ಯಾಚರಣೆ ತೊಡಗಿದ್ದರು. ಇಂದು ಸಂಜೆ ಶವ ಪತ್ತೆಯಾಗಿದೆ.  ಅಂಕಲಗಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ