Breaking News

ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ

Spread the love

ಚೆನ್ನೈ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಈ ಬಾರಿ ಕೊರೊನಾ ವೈರಸ್ ಕಾಟದಿಂದ ಜನ ಹಬ್ಬಗಳನ್ನು ಸರಳವಾಗಿ ಆಚರಿಸುತ್ತಿದ್ದಾರೆ. ಅಂತೆಯೇ ಈ ಬಾರಿ ಮೂರ್ತಿ ತಯಾರಕರು ಕೂಡ ಗಣೇಶನನ್ನು ಸ್ವಲ್ಪ ವಿಭಿನ್ನವಾಗಿ ರೂಪಿಸುತ್ತಿದ್ದಾರೆ.

ಹೌದು. ಕೊಯಂಬತ್ತೂರು ಮೂಲದ ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ. ಗಣೇಶ ಬಂದು ಕೊರೊನಾವನ್ನು ಹೊಡೆದು ಸಾಯಿಸುವಂತೆ ಮೂರ್ತಿಯನ್ನು ತಯಾರಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ರಾಜಾ, ಮಹಾಮಾರಿ ಕೋವಿಡ್ 19 ಎಂಬ ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನು ಈ ಗಣೇಶನ ವಿಗ್ರಹವನ್ನು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಕಲಾವಿದರೊಬ್ಬರು ಕೂಡ ಗಣೇಶನನ್ನು ಆರೋಗ್ಯ ರಕ್ಷಕನನ್ನಾಗಿ ಮಾಡಿದ್ದರು. ಗಣೇಶನನ್ನು ವೈದ್ಯ ಹಾಗೂ ಆತನ ವಾಹನ ಇಲಿಯನ್ನು ದಾದಿಯಂತೆ ಮೂರ್ತಿ ತಯಾರಿಸಿದ್ದರು


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ