Home / new delhi / ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

Spread the love

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯ ಸರ್ಕಲ್ ಗಳಲ್ಲಿ ಈಗಾಗಲೇ ಹೆಚ್ಚುವರಿಯಾಗಿ ಭದ್ರತೆ ನಿಯೋಜಿಸಲಾಗಿದೆ. ಬುಧವಾರ ಹಾಗೂ ಗುರುವಾರ ಎರಡೂ ದಿನಗಳಲ್ಲಿ ಈ ಆರು ಪ್ರದೇಶಗಳಿಗೂ ಭೇಟಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋಲಾರದ ಸುತ್ತಮುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸ್ ಚೌಕಿಗಳನ್ನು ಆರಂಭಿಸಲಾಗಿದೆ.´


Spread the love

About Laxminews 24x7

Check Also

ಹಿಂದೂಗಳನ್ನು ರಕ್ಷಿಸುವ ಪಕ್ಷಗಳನ್ನು ಆಯ್ಕೆ ಮಾಡಿ: ದಿಲೀಪ ಪರಾಂಡೆ

Spread the love ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ